ಸುಂಟಿಕೊಪ್ಪ, ನ. 29: ಇಲ್ಲಿನ ಶ್ರೀ ನಾರಾಯಣ ಗುರು ಬಿಲ್ಲವ ಸಂಘದ 164ನೇ ಜಯಂತಿ ಮತ್ತು ದೇಯಿ ಬೈದೇದಿ ಬಿಲ್ಲವ ಮಹಿಳಾ ಸಂಘದ 7ನೇ ವಾರ್ಷಿಕೋತ್ಸವವನ್ನು ಡಿ. 2 ರಂದು ಏರ್ಪಡಿಸಲಾಗಿದೆ.

ಬೆಳಿಗ್ಗೆ 8 ಗಂಟೆಗೆ ಶ್ರಿ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಗಣಹೋಮ ಹಾಗೂ ಗುರುಪೂಜೆ ನಡೆಯಲಿದೆ. ನಂತರ 11 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಿ.ಎಂ. ಮುಖೇಶ್ ವಹಿಸಲಿದ್ದು, ದೇಯಿ ಬೈದೇದಿ ಬಿಲ್ಲವ ಸಂಘದ ಮಹಿಳಾ ಸಂಘದ ಅಧ್ಯಕ್ಷೆ ಉಪಸ್ಥಿತರಿದ್ದು. ಮೈಸೂರು ಬಿಲ್ಲವ ಸಂಘದ ಗೌರವ ಅಧ್ಯಕ್ಷ ಜೆ.ಬಿ. ಪೂಜಾರಿ, ಶನಿವಾರಸಂತೆಯ ಪತ್ರಕರ್ತೆ ಶ.ಗ. ನಯನತಾರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿಯ ಸಂಘಟಣಾ ಕಾರ್ಯದರ್ಶಿ ಬಿ.ಟಿ. ಮಹೇಶ್ಚಂದ್ರ ಸಾಲ್ಯಾನ್, ಸೋಮವಾರಪೇಟೆ ತಾಲೂಕು ಶ್ರೀನಾರಾಯಣ ಗುರು ಸೇವಾ ಸಮಿತಿಯ ಅಧ್ಯಕ್ಷ ಬಿ.ಎ. ಬಾಸ್ಕರ್, ಮಡಿಕೇರಿ ತಾಲೂಕು ಬಿಲ್ಲವ ಸಂಘದ ಸಂಘದ ಅಧ್ಯಕ್ಷ ಚಂದ್ರಶೇಖರ್ (ರಾಜ), ಕುಶಾಲನಗರ ಕೋಟಿ ಚೆನ್ನಯ್ಯ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಹೆಚ್.ಬಿ. ರಮೇಶ್ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.