ಮೂರ್ನಾಡು, ನ. 29: : 2018-19ನೇ ಸಾಲಿನಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ ನಿರ್ಮಿಸಲಾದ ಮೂರ್ನಾಡು ಸರ್ಕಾರಿ ಪ್ರೌಢಶಾಲೆಯ ನೂತನ ಶಾಲಾ ಕಟ್ಟಡ ಉದ್ಘಾಟನೆ ತಾ. 30 ರಂದು (ಇಂದು) ನಡೆಯಲಿದೆ.

ಜಿಲ್ಲಾಡಳಿತ, ಕೊಡಗು ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ, ಮೂರ್ನಾಡು ಸರ್ಕಾರಿ ಪ್ರೌಢಶಾಲೆ ಇವರ ಆಶ್ರಯದಲ್ಲಿ ಪೂರ್ವಾಹ್ನ 9 ಗಂಟೆಗೆ ಆಯೋಜಿಸಲಾದ ಸಮಾರಂಭದಲ್ಲಿ ನೂತನ ಕಟ್ಟಡ ಉದ್ಘಾಟನೆಯನ್ನು ಮೈಸೂರು ಲೋಕಸಭಾ ಕ್ಷೇತ್ರ ಸಂಸದ ಪ್ರತಾಪ್ ಸಿಂಹ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್, ಕೊಡಗು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಶಾಸಕ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಎಸ್.ಎಲ್. ಬೋಜೆಗೌಡ, ಆಯನೂರು ಮಂಜುನಾಥ್ ಇನ್ನಿತರ ಗಣ್ಯರು ಆಗಮಿಸಲಿದ್ದಾರೆ.