ಚೆಟ್ಟಳ್ಳಿ, ನ. 29: ಚೆಟ್ಟಳ್ಳಿ ಸಹಕಾರ ಸಂಘದಲ್ಲಿ ಹತ್ತು ವರ್ಷಗಳ ಕಾಲ ಉತ್ತಮ ಸೇವೆ ಸಲ್ಲಿಸಿದ ಮಾಜಿ ನಿರ್ದೇಶಕರಾದ ಕೊಳಂಬೆ ಯಾದವ ಅವರಿಗೆ ಅನಾರೋಗ್ಯದ ನಿಮಿತ್ತ ಅಭಿನಂದನಾ ಸಮಾರಂಭಕ್ಕೆ ಬರಲು ಸಾಧ್ಯವಾಗದಿರುವದರಿಂದ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಮತ್ತು ನಿರ್ದೇಶಕರಾದ ಹೆಚ್.ಎಸ್. ತಿಮ್ಮಪ್ಪಯ್ಯ ಅವರ ಮನೆಗೆ ತೆರಳಿ ಸನ್ಮಾನಿಸಿದರು.