ವೀರಾಜಪೇಟೆ, ನ. 29: ಅರಮೇರಿ ಶ್ರೀ ಕಳಂಚೇರಿ ಮಠದಲ್ಲಿ ಡಿಸೆಂಬರ್ 2 ರಂದು ಹೊಂಬೆಳಕು ಮಾಸಿಕ ತತ್ವ ಚಿಂತನ ಗೋಷ್ಠಿಯ ಕಿರಣ 183 ನಡೆಯಲಿದ್ದು, ಕಾರ್ಯಕ್ರಮದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯವ್ಯಾಪಕವಾಗಿ ನವೆಂಬರ್ 16 ರಿಂದ ನಡೆಸಿಕೊಂಡು ಬರುತ್ತಿರುವ ಪ್ರವಾದಿ ಮುಹಮ್ಮದ್ (ಸ) ಮಾನವಕುಲದ ಶ್ರೇಷ್ಠ ಮಾರ್ಗದರ್ಶಕ ಎಂಬ ಶೀರ್ಷಿಕೆಯ ಅಭಿಯಾನದ ಸ್ಥಾನೀಯ ಮಟ್ಟದ ಸಮಾರೋಪ ನಡೆಯಲಿದೆ.

ನಿವೃತ್ತ ಮುಖ್ಯ ಶಿಕ್ಷಕ ಯೋಗ ಸಂಪನ್ಮೂಲ ವ್ಯಕ್ತಿ ಪಿ.ಎ. ಲಕ್ಷ್ಮಿ ನಾರಾಯಣ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರಿನ ಕೆ.ಪಿ. ಮುಹಮ್ಮದ್ ಇಸ್ಹಾಕ್ ಉಪನ್ಯಾಸ ನೀಡಲಿದ್ದಾರೆ. ಪೀಠಾಧಿಪತಿಗಳಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಗಳು ದಿವ್ಯಸಾನಿಧ್ಯ ವಹಿಸಲಿದ್ದಾರೆ.