ವೀರಾಜಪೇಟೆ, ನ. 29: ಕೊಡಗು ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘ ಹಾಗೂ ಮ್ಯೆಸೂರಿನ ನಾರಾಯಣ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ಮಾಜಿ ಸೈನಿಕರು, ಅವರ ಅವಲಂಭಿತರು ಹಾಗೂ ಸಾರ್ವಜನಿಕರಿಗೆ ಪಟ್ಟಣ ಪಂಚಾಯಿತಿಯ ಸಭಾಂಗಣದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು.

ಶಿಬಿರದಲ್ಲಿ ಹೃದಯ ಸಂಬಂಧಿ ಕಾಯಿಲೆ, ಸ್ತ್ರಿರೋಗ, ರಕ್ತದ ಒತ್ತಡ, ಸಕ್ಕರೆ ಕಾಯಿಲೆ ಸೇರಿದಂತೆ ಇನ್ನಿತರ ಕಾಯಿಲೆಗಳ ತಪಾಸಣೆ ಮಾಡಲಾಯಿತು. ನಾರಾಯಣ ಆಸ್ಪತ್ರೆಯ ತಜ್ಞವೈದ್ಯ ಡಾ ಶ್ರೀನಿವಾಸ್, ವೀರಾಜಪೇಟೆ ಇ.ಸಿ.ಹೆಚ್.ಎಸ್.ನ ವೈದ್ಯ ಕರ್ನಲ್ ಭರತ್ ಚೇವೂರ್ ತಪಾಸಣೆ ನಡೆಸಿದರು.

ಇದೇ ಸಂದರ್ಭದಲ್ಲಿ ಮಾಜಿ ಸೈನಿಕರ ಸಹಕಾರ ಸಂಘದ ಅಧ್ಯಕ್ಷ ಚೆಂದ್ರಿಮಾಡ ಗಣೇಶ್ ನಂಜಪ್ಪ, ಉಪಾಧ್ಯಕ್ಷ ಚಪ್ಪಂಡ ಹರೀಶ್ ಉತ್ತಯ್ಯ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.