ಕೂಡಿಗೆ, ನ. 30: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಹೆಬ್ಬಾಲೆ ವಲಯದ ಚಿನ್ನೇನಹಳ್ಳಿ ಗ್ರಾಮದಲ್ಲಿ ಪ್ರಗತಿ ಬಂಧು ಸ್ವಸಹಾಯ ಸಂಘದ ಸದಸ್ಯರಿಗೆ ಆರೋಗ್ಯ, ಸ್ವಚ್ಛತೆ ಮತ್ತು ಕುಟುಂಬ ನಿರ್ವಹಣೆ ಬಗ್ಗೆ ಮಾಹಿತಿ ನೀಡಲಾಯಿತು.

ಯೋಜನೆಯ ತರಬೇತಿ ಸಹಾಯಕ ಸಂತೋಷ್ ಮನೆ ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳುವದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಪ್ರತಿ ಮನೆಗಳಲ್ಲಿ ತುಳಸಿ ಗಿಡಗಳನ್ನು ನೆಟ್ಟು ಬೆಳೆಸಿ ಮನೆಗೆ ಒಳ್ಳೆಯ ಲಕ್ಷಣ ಇರುತ್ತದೆ ಎಂದರು. ಕುಟುಂಬದ ಸದಸ್ಯರು ಒಗ್ಗಟ್ಟಿನಿಂದ ಇದ್ದಲ್ಲಿ ಕುಟುಂಬ ನಿರ್ವಹಣೆ ಉತ್ತಮವಾಗಿರುತ್ತದೆ ಎಂದು ಸಲಹೆ ನೀಡಿದರು.

ಈ ಸಂದರ್ಭ ಸೇವಾ ಪ್ರತಿನಿಧಿ ಪ್ರಮೀಳಾ ವಾರದ ಸಭೆ ಉಳಿತಾಯದ ಬಗ್ಗೆ ಮಾಹಿತಿ ನೀಡಿದರು.