ಕೂಡಿಗೆ, ಡಿ. 1: ಶಿರಂಗಾಲ ಪದವಿಪೂರ್ವ ಕಾಲೇಜು ವತಿಯಿಂದ ಮಣಜೂರಿನಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ಎನ್.ಎಸ್.ಎಸ್. ಶಿಬಿರದ ಸಮಾರೋಪ ಸಮಾರಂಭ ನಡೆಯಿತು.

ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎನ್.ಬಿ. ಮಹೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ಕೆ.ಜಿ. ಅಶ್ವಿನಿಕುಮಾರ್ ಸಮಾರೋಪ ಭಾಷಣ ಮಾಡಿದರು. ದೇಶಪ್ರೇಮ ಮೈಗೂಡಿಸಿಕೊಂಡು ಸೇವಾ ಮನೋಭಾವ ದೊಂದಿಗೆ ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಸಿ ಕೊಳ್ಳುವಂತೆ ಕರೆ ನೀಡಿದರು. ಕೊಡಗು ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಫಿಲಿಪ್‍ವಾಸ್ ಮಾತನಾಡಿ, ಜೀವನದಲ್ಲಿ ಸದಾ ಒಳಿತನ್ನು ಮಾಡುವ ಗುಣ ಬೆಳೆಸಿ ಕೊಳ್ಳಬೇಕಿದೆ ಎಂದು ಸಲಹೆ ನೀಡಿದರು. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ. ಕೆಂಚಪ್ಪ ಮಾತನಾಡಿ, ಶಿಬಿರಾರ್ಥಿಗಳ ಸೇವಾ ಕಾರ್ಯಗಳನ್ನು ಪ್ರಶಂಸಿಸಿದರು. ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಹಂಡ್ರಂಗಿ ನಾಗರಾಜ್, ಹಿರಿಯ ಉಪ ನ್ಯಾಸಕರಾದ ಕೆ.ಕೆ. ಭವಾನಿ, ವೆಂಕಟೇಶ್, ಗಣೇಶ್, ಪೂಜಾ ಶಿಬಿರಾಧಿಕಾರಿ ಹೇಮಲತಾ ಇದ್ದರು.