ಮೂರ್ನಾಡು, ಡಿ.1: ಇಲ್ಲಿನ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆಯು ತಾ.5ರಂದು ಮಧ್ಯಾಹ್ನ 2.30 ಗಂಟೆಗೆ ಭಾರತಿ ವಿದ್ಯಾಸಂಸ್ಥೆ ಮರಗೋಡುವಿನಲ್ಲಿ ನಡೆಯಲಿದೆ.

ಕಾರ್ಯಕ್ರಮದ ಧ್ವಜಾರೋಹಣವನ್ನು ಬಾಚೆಟ್ಟಿರ ಜಿ. ಮಾದಪ್ಪ ಅಧ್ಯಕ್ಷರು ಮೂರ್ನಾಡು ವಿದ್ಯಾಸಂಸ್ಥೆ ನಡೆಸಿಕೊಡಲಿದ್ದು, ಉದ್ಘಾಟನೆಯನ್ನು ಪುದಿಯೊಕ್ಕಡ ಸಿ. ಸುಬ್ರಮಣಿ ಮಾಡಿಕೊಡಲಿದ್ದಾರೆ, ಮುಖ್ಯ ಅತಿಥಿಗಳಾಗಿ ಇತರರು ಆಗಮಿಸಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.