ಕೂಡಿಗೆ, ಡಿ. 1: ಕೂಡಿಗೆಯ ಸದ್ಗುರು ಅಪ್ಪಯ್ಯ ಪ್ರೌಢಶಾಲೆಯಲ್ಲಿ ಪೋಷಕರ ಸಭೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಖಜಾಂಚಿ ಎಂ.ಬಿ. ಜಯಂತ್ ವಹಿಸಿದ್ದರು.

ಸಭೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿ ಪೋಷಕರೊಂದಿಗೆ ಈ ಸಾಲಿನ ಫಲಿತಾಂಶ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭ ಶಾಲಾ ಆಡಳಿತ ಮಂಡಳಿ ನಿರ್ದೇಶಕರು, ಶಾಲಾ ಪೋಷಕ ಪರಿಷತ್ತಿನ ಸದಸ್ಯರು, ಶಾಲಾ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕ ವೃಂದ ಭಾಗವಹಿಸಿದ್ದರು.