ಕುಶಾಲನಗರ, ಡಿ. 1: ಕಾವೇರಿ ನದಿಗೆ ಈಜಲು ತೆರಳಿದ ಯುವಕನೊಬ್ಬ ಮುಳುಗಿ ಮೃತಪಟ್ಟ ಘಟನೆ ಕುಶಾಲನಗರ ಸಮೀಪ ಕೊಪ್ಪ ಗ್ರಾಮದಲ್ಲಿ ನಡೆದಿದೆ. ನೇಪಾಳಿ ಯುವಕ ಸುಮನ್ (19) ಎಂಬಾತ ಮೃತಪಟ್ಟ ಯುವಕ.

ಗ್ರಾಮದ ಗಿರುಗೂರು ವ್ಯಾಪ್ತಿಯಲ್ಲಿ ಕಾವೇರಿ ನದಿಯಲ್ಲಿ ಈ ಘಟನೆ ಸಂಭವಿಸಿದ್ದು ಬೈಲುಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಯುವಕನ ಮೃತದೇಹವನ್ನು ಹೊರತೆಗೆಯುವಲ್ಲಿ ಕ್ರಮ ಕೈಗೊಂಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಬೈಲುಕೊಪ್ಪ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.