ಗೋಣಿಕೊಪ್ಪ ವರದಿ, ಡಿ.1 : ವೀರಾಜಪೇಟೆ ತಾಲೂಕು ಕೃಷಿ ಇಲಾಖೆ, ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಹಯೋಗದಲ್ಲಿ ತಾ. 5 ರಂದು ಪೊನ್ನಂಪೇಟೆ ಹೋಬಳಿ ಮಟ್ಟದ ಕೃಷಿ ಅಭಿಯಾನ ಮತ್ತು ವಿಶ್ವ ಮಣ್ಣು ಆರೋಗ್ಯ ದಿನಾಚರಣೆಯನ್ನು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದೆ.

ಅಂದು ಬೆ. 10.30ಕ್ಕೆ ಶಾಸಕ ಕೆ.ಜಿ ಬೋಪಯ್ಯ ಉದ್ಘಾಟಿಸಲಿದ್ದಾರೆ. ಕೃಷಿ ವಸ್ತು ಪ್ರದರ್ಶನವನ್ನು ಜಿ.ಪಂ. ಸದಸ್ಯ ಸಿ.ಕೆ. ಬೋಪಣ್ಣ ಉದ್ಘಾಟಿಸಲಿದ್ದಾರೆ.

ವಿಜ್ಞಾನಿಗಳೊಂದಿಗೆ ರೈತ ಸಂವಾದ ಕಾರ್ಯಕ್ರಮದಲ್ಲಿ ಕೀಟ ಮತ್ತು ರೋಗ ತಜ್ಞ ಡಾ. ವೀರೇಂದ್ರಕುಮಾರ್, ತೋಟಗಾರಿಕೆ ಮತ್ತು ಮಣ್ಣು ವಿಷಯ ತಜ್ಞ ಡಾ. ಪ್ರಭಾಕರ್, ಮಣ್ಣು ವಿಜ್ಞಾನಿ ಡಾ. ಶಿವಪ್ರಸಾದ್, ಡಾ. ವಿಜಯ ಅಂಗಡಿ ಪಾಲ್ಗೊಳ್ಳಲಿದ್ದಾರೆ.