ಮಡಿಕೇರಿ, ಡಿ. 2: ಕಸ್ತೂರಿ ರಂಗನ್ ವರದಿಯ ಜಾರಿಗೆ ಸಂಬಂಧಿಸಿದಂತೆ ಕೇಂದ್ರದ ಪರಿಸರ ಮಂತ್ರಾಲಯ ಇದೀಗ 4ನೇ ಬಾರಿಗೆ ಮತ್ತೆ ಕರಡು ಅಧಿಸೂಚನೆಯನ್ನು ಹೊರಡಿಸಿರುವದಕ್ಕೆ ತಾ.2 ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನವಾಗಿದ್ದು, ಇದರ ಪ್ರಯುಕ್ತ ಸಂಪಾಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಭೆ ನಡೆಯಿತು. ಆಕ್ಷೇಪಣಾ ಪಟ್ಟಿಯನ್ನು ನೀಡಲಾಯಿತು. ಈ ಸಂದರ್ಭ ಪಯಸ್ವಿನಿ ಬ್ಯಾಂಕ್ ಅಧ್ಯಕ್ಷ ಬಾಲಚಂದ್ರ ಕಳಗಿ, ಪಂಚಾಯತಿ ಅಧ್ಯಕ್ಷ ಕುಮಾರ್ ಚಿದ್ಕಾರ್, ಭಾ.ಜ.ಪ. ಸಮಿತಿ ಅಧ್ಯಕ್ಷ ಓ.ಆರ್. ಮಾಯಿಲಪ್ಪ, ಗ್ರಾ.ಪಂ. ಉಪಾಧ್ಯಕ್ಷ ಸುಂದರ ಮತ್ತು ಸದಸ್ಯರು, ಊರವರು ಉಪಸ್ಥಿತರಿದ್ದರು.