ಕುಶಾಲನಗರ, ಡಿ. 2: ಆಡಂಬರದ ಹುಟ್ಟುಹಬ್ಬ ಆಚರಿಸುವ ಮೂಲಕ ಯಾವದೇ ಸಾಧನೆ ಅಸಾಧ್ಯ ಎಂದು ಕುಶಾಲನಗರ ಸಂತ ಸೆಬಾಸ್ಟಿಯನ್ ದೇವಾಲಯದ ಧರ್ಮಗುರು ಮೈಕಲ್ ಮರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಫಾತಿಮ ಪ್ರೌಢಶಾಲೆಯ ಸಭಾಂಗಣದಲ್ಲಿ ತಮ್ಮ ಹುಟ್ಟುಹಬ್ಬದ ಅಂಗವಾಗಿ ಶಾಲಾ ವಿದ್ಯಾರ್ಥಿಗಳು ಆಯೋಜಿಸಿದ್ದ ಶುಭಾಶಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಶಾಲೆಯ ಆವರಣದಲ್ಲಿ ನಡೆದ ಕಾರ್ಯಕ್ರಮ ಶಾಲೆಯ ಹಿರಿಯ ಶಿಕ್ಷಕಿ ಸವರಿನ್ ಡಿಸೋಜ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.