ಮಡಿಕೇರಿ, ಡಿ. 4: ಮೂಡಬಿದ್ರೆಯ ಅಳಿಯೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಬಾಲ್ ಬ್ಯಾಂಡ್‍ಮಿಂಟನ್ ಪಂದ್ಯಾಟದಲ್ಲಿ ಮೈಸೂರು ವಿಭಾಗ ಪ್ರಥಮ ಸ್ಥಾನ ಗಳಿಸಿದ್ದು, ಮದೆ ಮಹೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಬಿ.ಎಸ್. ಜತಿನ್ ಹಾಗೂ ಎಂ.ಎಸ್. ಪವನ್ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಮುಖ್ಯೋಪಾಧ್ಯಾಯ ಬಿ.ಎಸ್. ಗಣಪತಿ ತಿಳಿಸಿದ್ದಾರೆ. ಇವರಿಗೆ ದೈಹಿಕ ಶಿಕ್ಷಕ ಪಿ.ಪಿ. ಜಯರಾಮ ತರಬೇತಿ ನೀಡಿದ್ದಾರೆ. ರಾಷ್ಟ್ರಮಟ್ಟದ ಕ್ರೀಡಾಕೂಟ ಹೈದರಾಬಾದ್‍ನಲ್ಲಿ ನಡೆಯಲಿದೆ.