ಮಡಿಕೇರಿ, ಡಿ. 6: ಬುದ್ಧಿ ಮಾಂದ್ಯತೆಯಿಂದಾಗಿ ಸರಪಳಿ ಕಟ್ಟಿಸಿಕೊಂಡು ಬದುಕುತ್ತಿದ್ದ ಸಿದ್ದಾಪುರ ವ್ಯಾಪ್ತಿಯ ಅವರೆಗುಂದ ಗ್ರಾಮದ ಬಾಲಕ ಪ್ರವೀಣ್‍ಗೆ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಹಂತ ಹಂತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯಲ್ಲಿ ಪ್ರವೀಣ್ ಕಿರುಚಾಟ ಎಲ್ಲೆಂದರಲ್ಲಿ ಓಡುವದು ಮುಂದುವರೆದಿದ್ದು, ಈ ಹಿನ್ನೆಲೆ ಬೆಡ್‍ನಲ್ಲಿ ಕಾಲಿಗೆ ಹಗ್ಗಕಟ್ಟಿ ಚಿಕಿತ್ಸೆ ಕೊಡಲಾಗುತ್ತಿದೆ. ಪ್ರವೀಣ್ ತಾಯಿ ಲೀಲಾವತಿ ಜೊತೆಗಿದ್ದಾರೆ. ಮೂರ್ನಾಲ್ಕು ದಿನ ಚಿಕಿತ್ಸೆ ನೀಡಿ ನಂತರದ ಬೆಳವಣಿಗೆಯನ್ನು ಗಮನಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವದೆಂದು ಅಂಗವಿಕಲ ಕಲ್ಯಾಣಾಧಿಕಾರಿ ದೇವರಾಜ್ ‘ಶಕ್ತಿ’ಗೆ ತಿಳಿಸಿದ್ದಾರೆ.