ಮಡಿಕೇರಿ, ಡಿ.5: ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್ ಅವರ ಅಧ್ಯಕ್ಷತೆಯಲ್ಲಿ ತಾ.6 ರಂದು ನಡೆಯಬೇಕಿದ್ದ ಕೆ.ಡಿ.ಪಿ. ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಕಾರಣಾಂತರದಿಂದ ಮುಂದೂಡಲಾಗಿದೆ ಎಂದು ಜಿ.ಪಂ.ಸಿಇಒ ಲಕ್ಷ್ಮಿ ಪ್ರಿಯಾ ಅವರು ತಿಳಿಸಿದ್ದಾರೆ.