ಸುಂಟಿಕೊಪ್ಪ, ಡಿ. 5: ಸುಂಟಿಕೊಪ್ಪ ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ ಮತ್ತು ದೇಯಿಬೈದೇದಿ ಬಿಲ್ಲವ ಮಹಿಳಾ ಸಂಘದ 7ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ನೆರೆ ಹಾವಳಿಯಿಂದ ಸಂತ್ರಸ್ತಗೊಂಡ 3 ಕುಟುಂಬಗಳಿಗೆ ಸಮುದಾಯದ ವತಿಯಿಂದ ನೆರವಿನ ಸಹಾಯ ಹಸ್ತವನ್ನು ನೀಡಲಾಯಿತು.

ಇಲ್ಲಿನ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಸುಂಟಿಕೊಪ್ಪ ಬ್ರಹ್ಮಶ್ರೀ ನಾರಾಯಣ ಗುರುಗಳ 164ನೇ ಜಯಂತೋತ್ಸವ ಮತ್ತು ದೇಯಿಬೈದೇದಿ ಬಿಲ್ಲವ ಮಹಿಳಾ ಸಂಘದ 7ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಹೋಬಳಿ ವ್ಯಾಪ್ತಿಯ ಕೆದಕಲ್ ವ್ಯಾಪ್ತಿಯ ಹಾಲೇರಿಯ ಸ್ವಜಾತಿ ಬಂಧುಗಳ ಮೂರು ಕುಟುಂಬಗಳು ನೆರೆ ಹಾವಳಿಯಿಂದ ಸಂಪೂರ್ಣ ಮನೆ, ಜಾಗ ಮತ್ತು ಜೀವನಧಾರ ವಸ್ತುಗಳನ್ನು ಕಳೆದುಕೊಂಡು ನಿರ್ಗತಿಕರಾಗಿದ್ದ 3 ಕುಟುಂಬಗಳಿಗೆ ಸಮಾರಂಭದ ವೇದಿಕೆಯಲ್ಲಿ ಧನ ಸಹಾಯದ ಚೆಕ್ ವಿತರಿಸುವ ಮೂಲಕ ನೆರವಿನ ಹಸ್ತ ನೀಡಿದರು.

ಸಮಾರಂಭದ ವೇದಿಕೆಯಲ್ಲಿದ್ದ ಮೈಸೂರು ಬಿಲ್ಲವ ಸಂಘದ ಗೌರವಾಧ್ಯಕ್ಷ ಜೆ.ಬಿ. ಪೂಜಾರಿ, ಹೊಸಪೇಟೆ ಆರ್ಯ ಈಡಿಗ ಸಮಾಜದ ಗೌರವಾಧ್ಯಕ್ಷ ರಾಘವೇಂದ್ರ, ಸೋಮವಾರಪೇಟೆ ನಾರಾಯಣಗುರು ಸೇವಾ ಸಮಿತಿ ಅಧ್ಯಕ್ಷ ಬಿ.ಎ. ಭಾಸ್ಕರ್, ಕುಶಾಲನಗರ ಕೋಟಿಚೆನ್ನಯ್ಯ ಬಿಲ್ಲವ ಸಂಘದ ಹೆಚ್.ಬಿ. ರಮೇಶ್, ವೀರಾಜಪೇಟೆ ಬಿಲ್ಲವ ಸಮಾಜದ ಅಧ್ಯಕ್ಷ ಗಣೇಶ್ ಪೂಜಾರಿ, ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಮಹೇಶ್ಚಂದ್ರ ಸಾಲ್ಯಾನ್, ಸುಂಟಿಕೊಪ್ಪ ಶ್ರೀ ನಾರಾಯಣ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಮಣಿ ಮುಖೇಶ್, ದೇಯಿಬೈದೇದಿ ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ಮಧು ನಾಗಪ್ಪ ಇವರುಗಳು ಸಂತ್ರಸ್ತರಿಗೆ ಧನ ಸಹಾಯದ ಚೆಕ್ ವಿತರಿಸಿದರು.