ಮಡಿಕೇರಿ, ಡಿ. 5: ಪ್ರಕೃತಿ ವಿಕೋಪ ಸಂತ್ರಸ್ತರ ಪರಿಹಾರ ಹೋರಾಟ ಸಮಿತಿ ವತಿಯಿಂದ ಮಡಿಕೇರಿಯಲ್ಲಿ ತಾ. 7 ರಂದು ಆಯೋಜಿಸಲಾಗಿದ್ದ ಬೃಹತ್ ಜಾಥಾವನ್ನು ಮುಂದೂಡಲಾಗಿದ್ದು, ಸಂತ್ರಸ್ತ ಗ್ರಾಮಗಳ ಪ್ರಮುಖರು ಜಂಬೂರಿಗೆ ತೆರಳಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವ ಮೂಲಕ ಶೀಘ್ರ ಪರಿಹಾರ ಕಾರ್ಯಗಳನ್ನು ಪೂರ್ಣಗೊಳಿಸು ವಂತೆ ಒತ್ತಾಯಿಸಲು ನಿರ್ಧರಿಸಲಾಗಿದೆ ಎಂದು ಸಮಿತಿಯ ಕಾರ್ಯದರ್ಶಿ ಕೆ.ಟಿ. ಪ್ರಸನ್ನ ತಿಳಿಸಿದ್ದಾರೆ.