ಸೋಮವಾರಪೇಟೆ, ಜ. 9: ಐತಿಹಾಸಿಕ ಹಿನ್ನೆಲೆ ಹೊಂದಿರುವ ಸಮೀಪದ ಶಾಂತಳ್ಳಿ ಗ್ರಾಮದ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ದೇವಾಲಯದ ಜಾತ್ರೋತ್ಸವ ತಾ. 13 ರಿಂದ 17ರವರೆಗೆ ನಡೆಯಲಿದ್ದು, ದೇವಾಲಯದಲ್ಲಿ ಪೂರ್ವ ಸಿದ್ಧತಾ ಕಾರ್ಯಗಳು ಭರದಿಂದ ಸಾಗುತ್ತಿವೆ.

ಈಗಾಗಲೇ ದೇವಾಲಯ ಸೇರಿದಂತೆ ಪ್ರವೇಶ ದ್ವಾರಕ್ಕೆ ಸುಣ್ಣ ಬಣ್ಣ ಬಳಿಯಲಾಗಿದ್ದು, ದೇವಾಲಯ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುತ್ತಿದೆ.

ತಾ. 13ರಂದು ಸಂಜೆ 6.30ರಿಂದ ಬೆಳ್ಳಿ ಬಂಗಾರದ ದಿನದ ಜಾತ್ರಾ ಪ್ರಾರಂಭೋತ್ಸವ ಪೂಜೆ, ಧರ್ಮದರ್ಶಿ ಮಂಡಳಿ ಮತ್ತು ಗ್ರಾಮಸ್ಥರಿಂದ ಜಾತ್ರಾ ಪ್ರಾರಂಭ ಪೂಜೆ, ಪ್ರಾರ್ಥನೆ ನಡೆಯಲಿದೆ. ಸಂಜೆ 7.30ಕ್ಕೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ‘ಪಾಪು-ಬಾಪು’ ನಾಟಕ ಜರುಗಲಿದೆ.

ತಾ. 14 ರಂದು ಮಕರ ಸಂಕ್ರಮಣ ಕರುವಿನ ಹಬ್ಬದಂದು ಸಂಜೆ 7 ಗಂಟೆಗೆ ಗರುಡಗಂಭದ ಅಗ್ರಪೀಠದಲ್ಲಿ ತುಪ್ಪದ ನಂದಾದೀಪ ಬೆಳಗಿಸುವದು, ಅಂಕುರಾರ್ಪಣ ಪೂಜೆ, ಮಹಾಮಂಗಳಾರತಿ, ಪ್ರಾರ್ಥನೆ ನಡೆಯಲಿದೆ. ತಾ. 15ರಂದು ಪೂರ್ವಾಹ್ನ 11.50 ರಿಂದ ಅರಸು ಬಲ ಸೇವೆ, ಸಂಜೆ 7.30 ರಿಂದ ಗಣಹೋಮ, ರಂಗಪೂಜೆ, ಬೀದಿ ಉತ್ಸವ, ಮಹಾಮಂಗಳಾರತಿ ಜರುಗಲಿದೆ.

ತಾ. 16ರಂದು ಮಧ್ಯಾಹ್ನ 12.05ಕ್ಕೆ ಶ್ರೀಕುಮಾರಲಿಂಗೇಶ್ವರ ಸ್ವಾಮಿಯ 60ನೇ ಮಹಾ ರಥೋತ್ಸವ ಜರುಗಲಿದ್ದು, ನಂತರ ಭಕ್ತಾದಿಗಳಿಗೆ ಅನ್ನದಾನ ಏರ್ಪಡಿಸಲಾಗಿದೆ. ಇದರೊಂದಿಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಡೊಳ್ಳುಕುಣಿತ, ಕಂಸಾಳೆ ಕಾರ್ಯಕ್ರಮ ನಡೆಯಲಿದೆ. ರಾತ್ರಿ 7 ಗಂಟೆಗೆ ದೇವಾಲಯದಲ್ಲಿ ಪಲ್ಲಕ್ಕಿ ಉತ್ಸವ, ವೇದಮೂರ್ತಿ ಶಿಬರೂರು ಶ್ರೀ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನೆರವೇರಲಿವೆ.

ತಾ. 17ರಂದು ಮಹಾ ಸಂಪ್ರೋಕ್ಷಣೆ, ವಿವಿಧ ಅರ್ಚನೆ, ಪಂಚಾಮೃತಾಭಿಷೇಕ, ಕ್ಷೀರಾಭಿಷೇಕ, ನಾರಿಕೇಳ ಜಲಾಭಿಷೇಕ, ಮಹಾ ಮಂಗಳಾರತಿ, ಮಂಗಳ ಪ್ರಾರ್ಥನೆ ನಡೆಯಲಿದೆ. ಅಂದು ಬೆಳಗ್ಗೆ 10 ರಿಂದ 12.30 ರವರೆಗೆ ಪ್ರಾಥಮಿಕ ಹಾಗೂ ಪ್ರೌಢಶಾಲೆ, ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಅಪರಾಹ್ನ 2 ಗಂಟೆಗೆ ಜಾತ್ರಾ ಮುಕ್ತಾಯ ಸಮಾರಂಭ ನಡೆಯಲಿದೆ.

ಕ್ರೀಡಾಕೂಟ: ಮಹಾ ರಥೋತ್ಸವದ ಅಂಗವಾಗಿ ಕುಮಾರ ಲಿಂಗೇಶ್ವರ ಯುವಕ ಸಂಘದ ವತಿಯಿಂದ ತಾ. 15 ಮತ್ತು 16 ರಂದು ಅಂತರ್‍ಜಿಲ್ಲಾ ಮಟ್ಟದ ಪುರುಷರ ಕಬಡ್ಡಿ ಹಾಗೂ ಮಹಿಳೆಯರಿಗೆ ಥ್ರೋಬಾಲ್ ಪಂದ್ಯಾಟಗಳು ನಡೆಯಲಿದೆ. ಕಬಡ್ಡಿ ಪಂದ್ಯಾಟದಲ್ಲಿ ವಿಜೇತರಾಗುವ ತಂಡಗಳಿಗೆ ಪ್ರಥಮ ಬಹುಮಾನವಾಗಿ ಟ್ರೋಫಿ ಮತ್ತು ರೂ 20 ಸಾವಿರ ನಗದು, ದ್ವಿತೀಯ ಸ್ಥಾನ ಗಳಿಸುವ ತಂಡಕ್ಕೆ ರೂ. 10 ಸಾವಿರ ನಗದು, ತೃತೀಯ ಮತ್ತು ಚತುರ್ಥ ಸ್ಥಾನ ಗಳಿಸುವ ತಂಡಗಳಿಗೆ ತಲಾ 4 ಸಾವಿರ ನಗದು ಬಹುಮಾನ ನೀಡಲಾಗುವದು.

ಥ್ರೋಬಾಲ್ ವಿಭಾಗದಲ್ಲಿ ಪ್ರಥಮ ಬಹುಮಾನವಾಗಿ ರೂ. 10 ಸಾವಿರ ನಗದು, ದ್ವಿತೀಯ ಸ್ಥಾನವಾಗಿ ರೂ. 5 ಸಾವಿರ ನಗದು ಮತ್ತು ಟ್ರೋಫಿ ನೀಡಲಾಗುವದು ಎಂದು ದೇವಾಲಯ ಧರ್ಮದರ್ಶಿ ಮಂಡಳಿ ಅಧ್ಯಕ್ಷ ರಘುಕುಮಾರ್ ತಿಳಿಸಿದ್ದಾರೆ. - ವಿಜಯ್