ಸುಂಟಿಕೊಪ್ಪ, ಜ. 9: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಾನ್‍ಬೈಲ್ ಶ್ರೀ ರಾಮ ಮಂದಿರವನ್ನು ಸ್ವಚ್ಛಗೊಳಿಸುವ ಮೂಲಕ ಧಾರ್ಮಿಕ ಶೃದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಧಾರ್ಮಿಕ ಶೃದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಕ್ಕೆ ಕಾಫಿ ಬೆಳೆಗಾರರಾದ ನೀಲಮ್ಮ ಪೇಮಯ್ಯ, ಕಾನ್‍ಬೈಲ್ ತೋಟದ ವ್ಯವಸ್ಥಾಪಕ ಪಿ.ಜಿ. ಹೆಗ್ಡೆ ಅವರು ಚಾಲನೆ ನೀಡಿದರು. ಕಾನ್‍ಬೈಲ್ ವ್ಯಾಪ್ತಿಯ ಶ್ರೀ.ಕ್ಷೆ.ಧ.ಗ್ರಾ.ಯೋ. ಕಾನ್‍ಬೈಲ್ ಒಕ್ಕೂಟ ಹಾಗೂ ಸ್ವಸಹಾಯ ಸಂಘದ ಪದಾಧಿಕಾರಿಗಳು ಶ್ರೀ ರಾಮ ಮಂದಿರವನ್ನು ಸ್ವಚ್ಛಗೊಳಿಸಿದರು. ಈ ಸಂದರ್ಭ ಒಕ್ಕೂಟ ಅಧ್ಯಕ್ಷೆ ಖತೀಜ, ಉಪಾಧ್ಯಕ್ಷೆ ಯಶೋಧ ಬಸವರಾಜ್, ಸಹಕಾರ್ಯದರ್ಶಿ ಅನಿತಾ, ಸ್ವಸಹಾಯ ಸಂಘದ ಸದಸ್ಯರು ಹಾಗೂ ಸೇವಾಪ್ರತಿನಿಧಿ ಶಿವಕುಮಾರ್ ಇದ್ದರು.