ಮಡಿಕೇರಿ, ಜ. 31: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ 2017ನೇ ಸಾಲಿನ ವಾರ್ಷಿಕ ಪ್ರಶಸ್ತಿಗಾಗಿ ವರದಿ ಲೇಖನ, ಸುದ್ದಿ ಛಾಯಾಚಿತ್ರ ಆಹ್ವಾನಿಸಲಾಗಿದೆ. ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿಗೆ), ಪಟೇಲ್ ಭೈರಹನುಮಯ್ಯ ಪ್ರಶಸ್ತಿ (ಅತ್ಯುತ್ತಮ ಮಾನವೀಯ ವರದಿಗೆ), ಗಿರಿಧರ್ ಪ್ರಶಸ್ತಿ (ಅತ್ಯುತ್ತಮ ಅಪರಾಧ ವರದಿಗೆ), ಬಿ.ಎಸ್. ವೆಂಕಟರಾಮ ಪ್ರಶಸ್ತಿ (ಅತ್ಯುತ್ತಮ ಸ್ಕೂಪ್ ವರದಿಗೆ) ಕೆ.ಎ. ನೆಟ್ಟಕಲಪ್ಪ ಪ್ರಶಸ್ತಿ (ಅತ್ಯುತ್ತಮ ಕ್ರೀಡಾ ವರದಿಗೆ), ಖಾದ್ರಿ ಶಾಮಣ್ಣ ಪ್ರಶಸ್ತಿ (ಅತ್ಯುತ್ತಮ ವಿಮರ್ಶಾತ್ಮಕ ಲೇಖನಕ್ಕೆ), ಮಂಗಳ ಎಂ.ಸಿ. ವರ್ಗಿಸ್ ಪ್ರಶಸ್ತಿ (ವಾರ ಪತ್ರಿಕೆಯಲ್ಲಿ ಪ್ರಕಟವಾದ ಅತ್ಯುತ್ತಮ ಚಿತ್ರ ಲೇಖನಕ್ಕೆ), ಮಂಡಿಬೆಲೆ ರಾಜಣ್ಣ ಪ್ರಶಸ್ತಿ (ಅತ್ಯುತ್ತಮ ಸುದ್ದಿ ಛಾಯಾಚಿತ್ರಕ್ಕೆ), ಆರ್.ಎಲ್. ವಾಸುದೇವರಾವ್ ಪ್ರಶಸ್ತಿ (ಅರಣ್ಯ ಕುರಿತ ಅತ್ಯುತ್ತಮ ಲೇಖನಕ್ಕೆ), ಆರ್.ಎಲ್. ವಾಸುದೇವರಾವ್ ಪ್ರಶಸ್ತಿ (ವನ್ಯ ಪ್ರಾಣಿಗಳ ಕುರಿತ ಅತ್ಯುತ್ತಮ ಲೇಖನಕ್ಕೆ), ಬಿ.ಜಿ. ತಿಮ್ಮಪ್ಪಯ್ಯ ಪ್ರಶಸ್ತಿ (ಆರ್ಥಿಕ ದುರ್ಬಲ ವರ್ಗದವರ ಸ್ಥಿತಿ ಗತಿ ಕುರಿತ ಅತ್ಯುತ್ತಮ ಲೇಖನಕ್ಕೆ), ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ (ಗ್ರಾಮೀಣ ಜನಜೀವನ ಕುರಿತ ಅತ್ಯುತ್ತಮ ವರದಿಗೆ), ಕೆಂಪೇಗೌಡ ಸ್ಮಾರಕ ಪ್ರಶಸ್ತಿ (ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಭಿವೃದ್ದಿ ಕುರಿತ ಅತ್ಯುತ್ತಮ ವರದಿಗೆ), ಯಜಮಾನ್ ಟಿ. ನಾರಾಯಣ ಪ್ಪಸ್ಮಾರಕ ಪ್ರಶಸ್ತಿ (ಜಿಲ್ಲಾ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಅತ್ಯುತ್ತಮ ಕೃಷಿ ವರದಿಗೆ),
ಹಾಸ್ಯ ಚಕ್ರವರ್ತಿ ನಾಡಿಗೆರ ಕೃಷ್ಣರಾಯರ ಸ್ಮಾರಕ ಪ್ರಶಸ್ತಿ (ಅತ್ಯುತ್ತಮ ವಿಡಂಬನಾತ್ಮಕ ಲೇಖನಕ್ಕೆ), ಪ್ರಶಸ್ತಿಗೆ 2017 ಜನವರಿ 1 ರಿಂದ 2017 ಡಿಸೆಂಬರ್ 31 ರೊಳಗೆ ದಿನಪತ್ರಿಕೆ ಹಾಗೂ ನಿಯತಕಾಲಿಕೆಗಳಲ್ಲಿ ಪ್ರಕಟವಾದ ಲೇಖನ/ ವರದಿ/ ಸುದ್ದಿ ಛಾಯಾಚಿತ್ರಗಳನ್ನು ಕಳುಹಿಸಬೇಕು. ಲೇಖನ ಯಾವ ಪ್ರಶಸ್ತಿಗೆ ಎಂದು ಮುಖಪುಟದಲ್ಲಿ ಸ್ಪಷ್ಟವಾಗಿ ಬರೆಯಬೇಕು. ಅನುವಾದ ಮಾಡಿದ ವರದಿ, ಲೇಖನಗಳಿಗೆ ಅವಕಾಶವಿಲ್ಲ. ಒಬ್ಬರು ಒಂದು ಪ್ರಶಸ್ತಿಗೆ ಮಾತ್ರ ವರದಿ, ಲೇಖನಗಳನ್ನು ಕಳುಹಿಸಬಹುದು. ರಾಜ್ಯ ಸಂಘದ ಪದಾಧಿಕಾರಿಗಳು ಹಾಗೂ ಅವರ ಕುಟುಂಬ ವರ್ಗದವರು ಪ್ರಶಸ್ತಿಗೆ ವರದಿ ಕಳುಹಿಸುವಂತಿಲ್ಲ. ಲೇಖನ ವರದಿಗಳನ್ನು ಮೂರು ಪ್ರತಿಗಳಲ್ಲಿ ಕಳುಹಿಸಬೇಕು. ಒಂದು ಮೂಲ ಪ್ರತಿ ಇರಬೇಕು. ವಿದ್ಯುನ್ಮಾನ ಮಾಧ್ಯಮದ ಪ್ರವೇಶಕ್ಕೆ ಕ್ಲಿಪಿಂಗ್ ಮತ್ತು ಅದರ ಸ್ಕ್ರಿಪ್ಟ್ಗಳನ್ನು ಕಳುಹಿಸಬೇಕು.
ಲೇಖನದ ಜೊತೆಯಲ್ಲಿ ಸ್ವಪರಿಚಯ ಮತ್ತು ಪಾಸ್ ಪೋರ್ಟ್ ಸೈಜ್ ಭಾವಚಿತ್ರ ಕಳುಹಿಸಬೇಕು. ವರದಿಗಳನ್ನು ತಾ. 10 ರೊಳಗೆ ಕಚೇರಿಗೆ ತಲಪುವಂತೆ ಕಳುಹಿಸ ಬೇಕು. ನಂತರ ಬರುವ ವರದಿಗಳನ್ನು ಸ್ವೀಕರಿಸಲಾಗುವದಿಲ್ಲ. ನೀವು ಕಳುಹಿಸಿಕೊಡಬೇಕಾದ ವಿಳಾಸ ಅಧ್ಯಕ್ಷರು-ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಕಂದಾಯ ಭವನ, 3ನೇ ಮಹಡಿ, ಕೆ.ಜಿ. ರಸ್ತೆ, ಬೆಂಗಳೂರು -560009. ಈ ವಿಳಾಸಕ್ಕೆ ಕಳುಹಿಸಿ ಕೊಡುವಂತೆ ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಬಿ. ಅನು ಕಾರ್ಯಪ್ಪ ತಿಳಿಸಿದ್ದಾರೆ.