ಶನಿವಾರಸಂತೆ, ಏ. 27: ನಿಡ್ತ ಗ್ರಾ.ಪಂ. ವ್ಯಾಪ್ತಿಯ ಜಾಗೇನಹಳ್ಳಿ ಗ್ರಾಮದ ಗದ್ದೆ ಬದಿಯ ಸಾರ್ವಜನಿಕ ರಸ್ತೆಯ ಪಕ್ಕ ಅಕ್ರಮವಾಗಿ ಜೂಜಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆ ಶನಿವಾರಸಂತೆ ಪೊಲೀಸ್ ಠಾಣಾಧಿಕಾರಿ ಸಿ.ಎಂ. ತಿಮ್ಮಶೆಟ್ಟಿ ಸಿಬ್ಬಂದಿಗಳೊಡನೆ ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಜಾಗೇನಳ್ಳಿ ಗ್ರಾಮದ ಆರೋಪಿ ಪುಟ್ಟಯ್ಯ ಮತ್ತಿತರ 6 ಮಂದಿಯನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.