ಮಡಿಕೇರಿ, ಜು. 11: 11000 ಅನಧಿಕೃತ ತಂಬಾಕು ಬೆಳೆಗಾರರಿಗೆ ಲೈಸೆನ್ಸ್ ನೀಡುವ ಬಗ್ಗೆ ಇಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಕೇಂದ್ರ ವಾಣಿಜ್ಯ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಅದೇ ರೀತಿ ಬ್ಯಾರೆನ್‍ಗಳ ಸ್ಥಳಾಂತರಕ್ಕೆ ಇರುವ ತೊಡಕುಗಳನ್ನು ನಿವಾರಿಸಬೇಕೆಂದು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

ಸಚಿವರಾದ ಪಿಯುಷ್ ಗೊಯಲ್ ಅವರಿಂದ ಸಕಾರಾತ್ಮಕ ಸ್ಪಂದನ ದೊರೆತಿರುವದಾಗಿ ಸಂಸದರು ತಿಳಿಸಿದ್ದಾರೆ.