ಶನಿವಾರಸಂತೆ, ಜು. 11: ಸಮೀಪದ ಕೊಡ್ಲಿಪೇಟೆಯ ಶ್ರೀ ರುಕ್ಮಿಣಿ ಪಾಂಡುರಂಗ ದೇವಸ್ಥಾನದಲ್ಲಿ ಶ್ರೀ ನಾಮದೇವ ಸಿಂಪಿ ಸಮಾಜದ ವತಿಯಿಂದ ತಾ. 12 ರಂದು (ಇಂದು) ಮತ್ತು ತಾ. 13 ರಂದು ಆಷಾಢ ಏಕಾದಶಿ ಮತ್ತು ದ್ವಾದಶಿ ಹಬ್ಬದ ಆಚರಣೆಯನ್ನು ಏರ್ಪಡಿಸಲಾಗಿದೆ. ಎರಡು ದಿನಗಳಂದು ಬೆಳಿಗ್ಗೆ 10.30 ರಿಂದ ದೇವರಿಗೆ ಅಭಿಷೇಕ, ಅಲಂಕಾರ ಹಾಗೂ 12.30ಕ್ಕೆ ಮಹಾಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ನಡೆಯಲಿದೆ ಎಂದು ಶ್ರೀ ನಾಮದೇವ ಸಿಂಪಿ ಸಮಾಜದ ಅಧ್ಯಕ್ಷ ಡಿ. ಮೋಹನ್ ಕುಮಾರ್ ಕೊಳೆಕರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.