ಕೂಡಿಗೆ, ಜು. 11: ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮಸಭೆ ಪಂಚಾಯಿತಿ ಆವರಣದಲ್ಲಿ ನಡೆಯಿತು. ಸಭೆಯಲ್ಲಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿ ಬಗ್ಗೆ ಚರ್ಚೆಗಳು ನಡೆದವು.

ಸಭೆಯಲ್ಲಿ ರಾಷ್ಟ್ರೀಯ ಉದ್ಯೋಗ ಖಾತರಿಯ ಸಂಯೋಜಕ ದಿನೇಶ್ ವಿಷಯ ಕುರಿತು ತಿಳಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ ರವಿ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಹಾಜರಿದ್ದ ಗ್ರಾಮಸ್ಥರು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ.ವಿ. ಸಣ್ಣಪ್ಪ ಸೇರಿದಂತೆ ಸದಸ್ಯರು ಹಾಜರಿದ್ದರು. ನೋಡಲ್ ಅಧಿಕಾರಿ ಬಾಲಕೃಷ್ಣ ರೈ ಕಾರ್ಯನಿರ್ವಹಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಯಿಷಾ, ಉದ್ಯೋಗ ಖಾತರಿ ಯೋಜನೆಯ ಸಮರ್ಪಕ ಮಾಹಿತಿಯನ್ನು ನೀಡಿದರು. ಕಾರ್ಯದರ್ಶಿ ಮಂದಪ್ಪ ಸ್ವಾಗತಿಸಿ, ವಂದಿಸಿದರು.