ಸಿದ್ದಾಪುರ, ಜು. 11: ಅಮ್ಮತ್ತಿ ಹೋಬಳಿಯ ನಾಡ ಕಚೇರಿಯಲ್ಲಿ ಬುಧವಾರದಂದು ಜಿಲ್ಲಾ ಉಪವಿಭಾಗಾಧಿಕಾರಿ ಜವರೇಗೌಡ ಅವರ ಅಧ್ಯಕ್ಷತೆಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ನಡೆಯಿತು. ಈ ಸಂದರ್ಭ 6 ಮಂದಿ ಪಿಂಚಣಿದಾರರಿಗೆ ಪಿಂಚಣಿ ಆದೇಶ ಪತ್ರವನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ವೀರಾಜಪೇಟೆ ತಾಲೂಕು ತಹಶೀಲ್ದಾರ್ ಪುರಂದರ, ಅಮ್ಮತ್ತಿ ಹೋಬಳಿ ಉಪ ತಹಶಿಲ್ದಾರ್ ಪೊನ್ನು, ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್ ಹಾಜರಿದ್ದರು.