ಸಿದ್ದಾಪುರ, ಜು. 11: ಗಾಳಿ-ಮಳೆಗೆ ಮನೆಯ ಮೇಲೆ ಮರ ಬಿದ್ದು ಮನೆಯ ಭಾಗಶಃ ಹಾನಿಗೊಳಗಾದ ಘಟನೆ ಕೊಂಡಂಗೇರಿ ಗ್ರಾಮದಲ್ಲಿ ನಡೆದಿದೆ. ಕೊಂಡಂಗೇರಿ ನಿವಾಸಿಯಾಗಿರುವ ಉಮ್ಮರ್ ಎಂಬವರ ಮನೆಗೆ ಬೃಹತ್ ಗಾತ್ರದ ಮರವೊಂದು ಗಾಳಿಗೆ ಬಿದ್ದ ಪರಿಣಾಮ ಮನೆ ಹಾನಿಗೊಳಗಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಂಡಂಗೇರಿ ನಿವಾಸಿ ಶಮೀರ ಎಂಬವರ ಮನೆಯ ಮೇಲ್ಛಾವಣಿಯ ಶೀಟ್ ಗಳು ಗಾಳಿಗೆ ಹಾರಿ ಹೋಗಿದ್ದು, ಮನೆ ಹಾನಿಗೊಳಗಾಗಿದೆ. ಸ್ಥಳಕ್ಕೆ ಅಮ್ಮತ್ತಿ ಹೋಬಳಿ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದರು.