ಮಡಿಕೇರಿ, ಜು. 10 : ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಕುಸಿದಿರುವ ಮೇಲ್ಛಾವಣಿ ಕಾಮಗಾರಿಯನ್ನು ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಪರಿಶೀಲನೆ ನಡೆಸಿದರು.

ಕಾಮಗಾರಿಯನ್ನು ವ್ಯವಸ್ಥಿತವಾಗಿ ಶೀಘ್ರವೇ ಮುಗಿಸುವಂತೆ ಸುನಿಲ್ ಸುಬ್ರಮಣಿ ಸೂಚಿಸಿದರು. ಎಂಟು ದಿನದೊಳಗೆ ಕಾಮಗಾರಿ ಮುಗಿಸುತ್ತೇವೆ ಎಂದು ಡಿಪೋ ವ್ಯವಸ್ಥಾಪಕಿ ಗೀತಾ ಮಾಹಿತಿ ನೀಡಿದರು. ಬಸ್ ನಿಲ್ದಾಣದ ಸುತ್ತ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಸುನಿಲ್ ಸಲಹೆಯಿತ್ತರು. ಈ ಸಂದರ್ಭ ನಗರಸಭಾ ಮಾಜಿ ಉಪಾಧ್ಯಕ್ಷ ಟಿ.ಎಸ್. ಪ್ರಕಾಶ್, ಮಾಜಿ ಸದಸ್ಯ ಉಣ್ಣಿಕೃಷ್ಣ ಇದ್ದರು.