ಮಡಿಕೇರಿ, ಸೆ. 18: ದಕ್ಷಿಣ ಕರ್ನಾಟಕ ವಲಯ ಮಟ್ಟದ ಅಂಚೆ ಅದಾಲತ್ ಸಭೆಯು ತಾ. 20 ರಂದು ಬೆಳಿಗ್ಗೆ 11 ಘಂಟೆಗೆ ನಗರದ ಪ್ರಧಾನ ಅಂಚೆ ಕಚೇರಿಯ ಮೊದಲ ಮಹಡಿಯಲ್ಲಿ ನಡೆಯಲಿದೆ.

ಸಭೆಯಲ್ಲಿ ಅಂಚೆ ಸೇವೆಗೆ ಸಂಬಂಧಿಸಿದ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ಹಾಗೂ ಸಾರ್ವಜನಿಕರು ವೈಯಕ್ತಿಕವಾಗಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ವ್ಯಕ್ತಪಡಿಸಿ ಚರ್ಚಿಸಲು ಕೋರಲಾಗಿದೆ. ಈ ಸಭೆಯಲ್ಲಿ ದಕ್ಷಿಣ ಕರ್ನಾಟಕ ವಲಯದ ಅಂಚೆ ನಿರ್ದೇಶಕರು, ಬೆಂಗಳೂರು ಇವರು ಉಪಸ್ಥಿತಿ ಇರುವರು ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.