ಮಡಿಕೇರಿ, ಸೆ. 18: ಇಲ್ಲಿನ ಶ್ರೀ ಓಂಕಾರೇಶ್ವರ ದೇವಾಲಯದ ಪ್ರಧಾನ ಅರ್ಚಕರಾಗಿದ್ದ ಬಿ.ಜಿ. ನಾರಾಯಣ ಭಟ್ (68) ಅವರು ಇಂದು ಬೆಳಿಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ವಿಧಿವಶರಾಗಿದ್ದಾರೆ. ಕಳೆದ 54 ವರ್ಷಗಳಿಂದ ಐತಿಹಾಸಿಕ ಶ್ರೀ ಓಂಕಾರೇಶ್ವರ ಸನ್ನಿಧಿಯಲ್ಲಿ ತ್ರಿಕಾಲ ಪೂಜೆಯೊಂದಿಗೆ ನಾರಾಯಣ ಭಟ್ ಜನಾನುರಾಗಿಯಾಗಿದ್ದರು.