ಮಡಿಕೇರಿ, ಸೆ. 18: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ವರ್ಷಾಚರಣೆ ಪ್ರಯುಕ್ತ ನಗರದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಗಾಂಧೀಜಿ ವಿಚಾರಧಾರೆ ಕುರಿತು ವಿವಿಧ ಸ್ಪರ್ಧಾ ಕಾರ್ಯಕ್ರಮ ತಾ. 24 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ.

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ (ಗಾಂಧೀಜಿ ಅವರ ಸತ್ಯ, ಅಹಿಂಸೆ, ಸರಳತೆ ಅಥವಾ ಗ್ರಾಮ ಸ್ವರಾಜ್ಯ- ರಾಮ ರಾಜ್ಯದ ಕಲ್ಪನೆ), ಪದವಿ ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ (ಗ್ರಾಮೋದ್ಧಾರ/ ದೇಶೋದ್ಧಾರ ಅಥವಾ ವ್ಯಕ್ತ್ತಿ ಹಾಗೂ ಶಕ್ತಿಯಾಗಿ ಗಾಂಧೀಜಿ), ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಛದ್ಮವೇಷ ಸ್ಪರ್ಧೆ, ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ.

ಹಾಗೆಯೇ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ದೇಶಭಕ್ತಿ ಗೀತೆ ಸ್ಪರ್ಧೆ ಏರ್ಪಡಿಸಲಾಗಿದ್ದು, ಭಾಗವಹಿಸುವ ವಿದ್ಯಾರ್ಥಿಗಳು ತಮ್ಮ ಹೆಸರು, ಶಾಲೆಯ ಹೆಸರು, ಮುಖ್ಯೋಪಾಧ್ಯಾಯರು/ ಪ್ರಾಂಶುಪಾಲರ ದೂರವಾಣಿ ಸಂಖ್ಯೆ ಮತ್ತಿತರ ವಿಳಾಸ ಒಳಗೊಂಡ ಮಾಹಿತಿಯನ್ನು ಸ್ಪರ್ಧೆಗಳ ಸಂಯೋಜಕರು ಹಾಗೂ ಶಿಕ್ಷಕರಾದ ವಿಲ್‍ಫ್ರೆಡ್ ಕ್ರಾಸ್ತಾ (9448773078), ರೇವತಿ ರಮೇಶ್ (9663254829) ಇವರಿಗೆ ತಲಪಿಸುವಂತೆ ಸರ್ವೋದಯ ಸಮಿತಿ ಅಧ್ಯಕ್ಷ ಟಿ.ಪಿ. ರಮೇಶ್ ಕೋರಿದ್ದಾರೆ.