ಕೂಡಿಗೆ, ಸೆ.18: ಪದವಿಪೂರ್ವ ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜು ಕುಶಾಲನಗರ ಇವರ ಆಶ್ರಯದಲ್ಲಿ ಸೋಮವಾರಪೇಟೆ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ (ಮೇಲಾಟಗಳು) ತಾ.19ರಂದು (ಇಂದು) ಕೂಡಿಗೆಯ ಕ್ರೀಡಾಶಾಲಾ ಮೈದಾನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪದವಿಪೂರ್ವ ಉಪ ನಿರ್ದೇಶಕ ಜಿ.ಕೆಂಚಪ್ಪ. ನೆರವೇರಿಸಲಿದ್ದಾರೆ. ಜಿಲ್ಲಾ ಪ್ರಾಚಾರ್ಯರ ಸಂಘದ ಕಾರ್ಯದರ್ಶಿ ಮಹಾಲಿಂಗಯ್ಯ, ಕ್ರೀಡಾ ಶಾಲೆ ಪ್ರಾಂಶುಪಾಲೆ ಕುಂತಿ ಬೋಪಯ್ಯ, ಉಪನ್ಯಾಸಕರ ಸಂಘದ ಅದ್ಯಕ್ಷ ಫಿಲಿಪ್ ವಾಸ್. ಭಾಗವಹಿಸಲಿದ್ದಾರೆ ಎಂದು ಕಾಲೇಜು ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.