ಮಡಿಕೇರಿ, ಸೆ. 18: ಮಡಿಕೇರಿ ತಾಲೂಕಿನ ಬೆಟ್ಟಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಅಂಗವಾಗಿ ಸೇವಾ ಸಪ್ತಾಹವನ್ನು ಆಚರಿಸಲಾಯಿತು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ರಸ್ತೆಗಳನ್ನು ಶಾಸಕ ಕೆ.ಜಿ. ಬೋಪಯ್ಯ ಅವರ ಮಾರ್ಗದರ್ಶನದಲ್ಲಿ ಸ್ವಚ್ಛ ಮಾಡುವದರ ಮೂಲಕ 1 ವಾರ ನಡೆಯುವ ಸಪ್ತಾಹದ ಜಿಲ್ಲೆಯ ಎಲ್ಲಾ ಕಾರ್ಯಕ್ರಮದ ವಿವರಣೆ ನೀಡಿದರು. ಸೇವಾ ಸಪ್ತಾಹದ ಕುರಿತು ಜಿಲ್ಲಾ ಸಂಚಾಲಕ ಮಹೇಶ್ ಜೈನಿ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಸಹ ಸಂಚಾಲಕಿ ಅನಿತಾ ಪೂವಯ್ಯ, ಮಡಿಕೇರಿ ತಾಲೂಕು ಸಂಚಾಲಕ ಕಾಂಗಿ ಅಶ್ವಿನ್ ಸತೀಶ್, ಸಹಸಂಚಾಲಕ ಭೀಮಯ್ಯ, ಮಡಿಕೇರಿ ತಾಲೂಕು ಅಧ್ಯಕ್ಷ ಕಿಶೋರ್ ಕುಮಾರ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಎ. ಹರೀಶ್. ತಾಲೂಕು ಪಂಚಾಯಿತಿ ಸದಸ್ಯರಾದ ಕೊಡಪಾಲ್ ಗಣಪತಿ, ಕುಮುದ, ಸ್ಥಾನೀಯ ಸಮಿತಿ ಆಧ್ಯಕ್ಷ ಕಡ್ಯದ ವಿಜಯ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಜರಿದ್ದರು