ಮಡಿಕೇರಿ, ಸೆ. 19 : ದಕ್ಷಿಣ ಕರ್ನಾಟಕ ವಲಯ ಮಟ್ಟದ ಅಂಚೆ ಅದಾಲತ್ ಸಭೆಯು ತಾ. 20 ರಂದು (ಇಂದು) ಬೆಳಿಗ್ಗೆ 11 ಘಂಟೆಗೆ ನಗರದ ಪ್ರಧಾನ ಅಂಚೆ ಕಚೇರಿಯ ಮೊದಲ ಮಹಡಿಯಲ್ಲಿ ನಡೆಯಲಿದೆ.

ಈ ಸಭೆಯಲ್ಲಿ ಅಂಚೆ ಸೇವೆಗೆ ಸಂಬಂಧಿಸಿದ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ ಹಾಗೂ ಸಾರ್ವಜನಿಕರು ವೈಯಕ್ತಿಕವಾಗಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ವ್ಯಕ್ತಪಡಿಸಿ ಚರ್ಚಿಸಲು ಕೋರಲಾಗಿದೆ. ಈ ಸಭೆಯಲ್ಲಿ ದಕ್ಷಿಣ ಕರ್ನಾಟಕ ವಲಯದ ಅಂಚೆ ನಿರ್ದೇಶಕರು, ಬೆಂಗಳೂರು ಇವರು ಉಪಸ್ಥಿತಿ ಇರುವರು ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.