ಸುಂಟಿಕೊಪ್ಪ, ಸೆ. 19: ಸಮೀಪದ ಕೊಡಗರಹಳ್ಳಿ ಶಾಂತಿನಿಕೇತನ ಶಾಲೆಯಲ್ಲಿ ನಡೆದ ಸುಂಟಿಕೊಪ್ಪ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲಿಕೋತ್ಸವ ಕಾರ್ಯಕ್ರಮದ ಕಿರಿಯರ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ಚಿಕ್ಲಿಹೊಳೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಬಿ.ಎನ್. ರಕ್ಷಿತಾ ಪೂಜಾರಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈಕೆ ಕಂಬಿಬಾಣೆ ನಿವಾಸಿ ನಾಗೇಶ್ ಪೂಜಾರಿ ಮತ್ತು ಪ್ರಮೀಳಾ ದಂಪತಿಗಳ ಪುತ್ರಿ.