ವೀರಾಜಪೇಟೆ, ಸೆ. 19: ಬೆಂಗಳೂರಿನ ಚಿಗುರು ಕಲ್ಚರಲ್ ಟ್ರಸ್ಟ್ ಈಚೆಗೆ ಆಯೋಜಿಸಿದ್ದ ರಾಜ್ಯ ಮಟ್ಟದ ಭರತ ನಾಟ್ಯ ಸ್ಪರ್ಧೆಯಲ್ಲಿ ಬಿ.ಎಸ್.ಶಿಲ್ಪ ಯುವ ಚೇತನ ಪ್ರಶಸ್ತಿಯೊಂದಿಗೆ ಚಿನ್ನದ ಪದಕ ಪಡೆದಿದ್ದಾಳೆ.

ಶಿಲ್ಪ ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಇಲ್ಲಿನ ನೃತ್ಯ ಗುರು ಪ್ರೇಮಾಂಜಲಿಯ ಶಿಷ್ಯೆಯಾಗಿದ್ದು ನೆಹರೂನಗರದ ರಶ್ಮಿ ದಂಪತಿಯ ಪುತ್ರಿಯಾಗಿದ್ದಾಳೆ.