ನಾಪೆÇೀಕ್ಲು, ಸೆ. 19: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಗೋಣಿಕೊಪ್ಪದ ಹರಿಶ್ಚಂದ್ರಪುರದಲ್ಲಿ ಸೋಲಾರ್ ಆಧಾರಿತ ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮವನ್ನು ಗೋಣಿಕೊಪ್ಪ ಬಿ ಒಕ್ಕೂಟದ ಅಧ್ಯಕ್ಷೆ ಲತಾ ಉದ್ಘಾಟಿಸಿದರು. ಈ ಸಂದರ್ಭ ವೀರಾಜಪೇಟೆ ಮಡಿಕೇರಿ ಕೃಷಿ ಮೇಲ್ವಿಚಾರಕ ಚೇತನ್ ಕೆ. ಮಾತನಾಡಿ, ಹೆಚ್ಚು ಸ್ವಉದ್ಯೋಗದತ್ತ ಒಲವು ತೋರಿ ನಿರುದ್ಯೋಗ ಸಮಸ್ಯೆಯನ್ನು ಕಡಿಮೆ ಮಾಡಬೇಕು ಎಂದರು. ಸೇವಾಪ್ರತಿನಿಧಿ ಸರಿತಾ ಎ.ಕೆ. ಸಂಘದ ಸದಸ್ಯರು ಉಪಸ್ಥಿತರಿದ್ದರು.