ನಾಪೋಕ್ಲು, ಸೆ. 19: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವೀರಾಜಪೇಟೆ-ಮಡಿಕೇರಿ ವತಿಯಿಂದ ಅಮ್ಮತ್ತಿಯ ಸಿದ್ದಾಪುರ ಬಿ ಒಕ್ಕೂಟದಿಂದ ಗುಹ್ಯದಲ್ಲಿ ಹೈನುಗಾರಿಕಾ ತರಬೇತಿ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಣಿ ಉದ್ಘಾಟನೆಯನ್ನು ನೆರವೇರಿಸಿದರು. ತಾಲೂಕಿನ ಕೃಷಿ ಅಧಿಕಾರಿ ಚೇತನ್ ಕೆ. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಾಗ ಆರ್ಥಿಕ ಸದೃಢತೆಯ ಲಾಭಗಳು ತಳಿಗಳ ವಿಚಾರ, ಕೊಟ್ಟಿಗೆ ರಚನೆ ಇನ್ನಿತರ ಪೂರಕ ವಿಚಾರಗಳ ಮಾಹಿತಿ ನೀಡಿದರು. ವಲಯದ ಮೇಲ್ವಿಚಾರಕ ಪ್ರದೀಪ್ ರೈ ಪ್ರಾಸ್ತಾವಿಕ ಮಾತನಾಡಿದ ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿ ಉಷಾ ಹಾಗೂ ಸಂಘದ 35 ರೈತ ಸದಸ್ಯರು ಪಾಲ್ಗೊಂಡಿದ್ದರು.