ಸೋಮವಾರಪೇಟೆ, ಸೆ. 20: ಸಮೀಪದ ಅರಶಿನಗುಪ್ಪೆ-ಸಿದ್ಧಲಿಂಗಪುರದ ಶ್ರೀ ಮಂಜುನಾಥ ಮತ್ತು ನವನಾಗ ಸನ್ನಿಧಿಯಲ್ಲಿ ಮಾಸಿಕ ಪಂಚಮಿ ಪೂಜೆ ಶ್ರದ್ಧಾಭಕ್ತಿಯಿಂದ ನೆರವೇರಿತು.

ದೇವಾಲಯದ ಪ್ರಧಾನ ಗುರುಗಳಾದ ರಾಜೇಶ್‍ನಾಥ್ ಗೂರೂಜಿ ಅವರ ನೇತೃತ್ವದಲ್ಲಿ ಬೆಳಗ್ಗಿನಿಂದಲೇ ಮಂಜುನಾಥ ಸನ್ನಿಧಿಯಲ್ಲಿ ವಿಶೇಷ ಪೂಜೆಗಳು ನೆರವೇರಿದವು. ನಂತರ ಅರ್ಚಕ ಜಗದೀಶ್ ಉಡುಪ ನೇತೃತ್ವದಲ್ಲಿ ನವನಾಗ ಸನ್ನಿಧಿಯಲ್ಲಿ ಪಂಚಮಿಯ ಪೂಜೆ, ತಂಬಿಲ ಸೇವೆ, ವಿವಿಧ ಅಭಿಷೇಕ, ಅಲಂಕಾರ ಪೂಜೆ, ಮಹಾಮಂಗಳಾರತಿ ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು.