ಕರಿಕೆ, ಸೆ. 20: ಇಲ್ಲಿನ ಸರಕಾರಿ ಪೌಢ ಶಾಲೆ ಹಾಗೂ ಪ್ರಾಥಮಿಕ ಶಾಲೆ ಮತ್ತು ಕರಿಕೆ ಕಾಲೋನಿ ಪ್ರಾಥಮಿಕ ಶಾಲೆ, ಕರಿಕೆ ಆಶ್ರಮ ಶಾಲೆ ವಿದ್ಯಾರ್ಥಿಗಳಿಗೆ ಪೊನ್ನಂಪೇಟೆ ಶ್ರೀ ರಾಮಕೃಷ್ಣ ಶಾರದಾಶ್ರಮ ಶಾಖೆಯ ವತಿಯಿಂದ ಉಚಿತ ನೋಟ್ ಪುಸ್ತಕ ಮತ್ತು ಆರೋಗ್ಯ ಪರಿಕರಗಳನ್ನು ವಿತರಿಸಲಾಯಿತು.

ಇತ್ತೀಚೆಗೆ ಕರಿಕೆ ಗ್ರಾಮಕ್ಕೆ ಭೇಟಿ ನೀಡಿದ ಶಾರದ ಆಶ್ರಮದ ಸ್ವಾಮೀಜಿಗಳು ಹಾಗೂ ಸಿಬ್ಬಂದಿ ವರ್ಗ ಆಶ್ರಮದಿಂದ ತರಲಾದ ನೋಟ್ ಪುಸ್ತಕ ಹಾಗೂ ಆರೋಗ್ಯ ಪರಿಕರಗಳನ್ನು ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಿದರು.

ಈ ಸಂದರ್ಭ ಪ್ರೌಢಶಾಲಾ ಮುಖ್ಯ ಶಿಕ್ಷಕ ಮನೋಹರ್, ಕರಿಕೆ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಕುಸುಮಾವತಿ, ಕರಿಕೆ ಕಾಲೋನಿ ಶಾಲೆಯ ಮುಖ್ಯ ಶಿಕ್ಷಕ ಎನ್. ಎಸ್. ಕುಮಾರ್, ಆಶ್ರಮ ಶಾಲಾ ಮುಖ್ಯ ಶಿಕ್ಷಕ ಬರಮಪ್ಪ ಪಾಷಾಗಾರ್, ಶಿಕ್ಷಕರಾದ ಪ್ರವೀಣ್, ಮಧುರ, ಕಾವ್ಯ, ಗಣೇಶಾಚಾರ್, ಮಹಾಲಕ್ಷ್ಮಿ ಉಪಸ್ಥಿತರಿದ್ದರು.