ಸೋಮವಾರಪೇಟೆ, ಸೆ. 20: ತಾಲೂಕು ಒಕ್ಕಲಿಗರ ಸಂಘದ ವಿಶ್ವ ಮಾನವ ಕುವೆಂಪು ವಿದ್ಯಾ ಸಂಸ್ಥೆಯ ಪ್ರಾಥಮಿಕ ಹಾಗು ಪ್ರೌಢ ಶಾಲಾ ವಿಭಾಗದ ಬಾಲಕಿಯರ ತಂಡ ಬ್ಯಾಡ್ಮಿಂಟನ್‍ನಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದೆ. ವೀರಾಜಪೇಟೆ ಸಂತ ಅನ್ನಮ್ಮ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಟೂರ್ನಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಮಂಡ್ಯದಲ್ಲಿ ನಡೆಯುವ ವಿಭಾಗೀಯ ಮಟ್ಟದ ಪಂದ್ಯಾ ವಳಿಗೆ ವಿದ್ಯಾರ್ಥಿಗಳು ಆಯ್ಕೆ ಯಾಗಿದ್ದಾರೆ. ಪ್ರಾಥಮಿಕ ವಿಭಾಗದ ಡಬಲ್ಸ್‍ನಲ್ಲಿ ಯಡೂರು ಧನ್ಯ, ಪುಷ್ಪಾಂಜಲಿ, ಅಭೀಶ, ಹಾಗೂ ಸಿಂಗಲ್ಸ್‍ನಲ್ಲಿ ಧನ್ಯ ತಂಡದಲ್ಲಿದ್ದು, ಪ್ರಥಮ ಸ್ಥಾನಗಳಿಸಿದ್ದಾರೆ. ಪ್ರೌಢಶಾಲಾ ವಿಭಾಗದಲ್ಲಿ ಎಂ.ಆರ್. ಯಶಸ್ವಿನಿ, ಎ.ಈ. ಅನನ್ಯ, ಎಸ್.ವಿ. ಹಂಸಿನಿ ತಂಡದಲ್ಲಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕಿ ಮಿಲ್ಡ್ರೆಡ್ ಗೋನ್ಸಾಲ್ವೆಸ್, ದೈಹಿಕ ಶಿಕ್ಷಣ ಶಿಕ್ಷಕಿ ಇಂದಿರಾ ತರಬೇತಿ ನೀಡಿದ್ದಾರೆ.