ಶನಿವಾರಸಂತೆ, ಸೆ. 20: ಕರ್ನಾಟಕ ಭೂ ಹಕ್ಕುದಾರರ ವೇದಿಕೆ ಕೊಡಗು ಜಿಲ್ಲಾ ಘಟಕದ ವತಿಯಿಂದ ಸೆ.21ರಂದು (ಇಂದು) ಭೂಮಿ ಮತ್ತು ವಸತಿ ಹಕ್ಕಿಗಾಗಿ ಸರ್ಕಾರವನ್ನು ಒತ್ತಾಯಿಸಲು ಕಾಲ್ನಡಿಗೆ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 10.30ಕ್ಕೆ ಗುಡುಗಳಲೆ ಜಾತ್ರಾ ಮೈದಾನದಿಂದ ಆರಂಭವಾಗುವ ಜಾಥಾ ಮುಖ್ಯರಸ್ತೆಯಲ್ಲಿ ಸಾಗಿ, ನಾಡ ಕಚೇರಿಗೆ ಆಗಮಿಸಿ, ಕಂದಾಯ ಅಧಿಕಾರಿಗೆ ಮನವಿ ಸಲ್ಲಿಸಲಾಗುವದು ಎಂದು ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಕೆ. ಪುಟ್ಟಸ್ವಾಮಿ ಹಾಗೂ ಕಾರ್ಯಕರ್ತ ಸುನಂದ ಕುಮಾರ್ ತಿಳಿಸಿದ್ದಾರೆ.