ಮಡಿಕೇರಿ, ಸೆ. 20: ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರ ಬದಲಾವಣೆಯಾಗಲಿದೆ ಎಂಬ ಊಹಾಪೋಹವನ್ನು ಸೃಷ್ಟಿಸುವ ಮೂಲಕ ಕಾರ್ಯಕರ್ತರು ಹಾಗೂ ಮತದಾರರಲ್ಲಿ ಗೊಂದಲ ಮೂಡಿಸುವ ಪ್ರಯತ್ನದಲ್ಲಿ ಕೆಲವರು ತೊಡಗಿದ್ದು, ಯಾರೂ ವದಂತಿಗಳಿಗೆ ಕಿವಿಗೊಡಬಾರದೆಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಮನವಿ ಮಾಡಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲಾಧ್ಯಕ್ಷರ ಬದಲಾವಣೆ ಕುರಿತು ಕೆಪಿಸಿಸಿ ಮತ್ತು ಹೈಕಮಾಂಡ್ ಹಂತದಲ್ಲಿ ಯಾವದೇ ರೀತಿಯ ಚಿಂತನೆಗಳಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.