ಶನಿವಾರಸಂತೆ, ಜೂ. ೧೭: ಕವಿ ಡಾ. ಸಿದ್ಧಲಿಂಗಯ್ಯ ಅವರಿಗೆ ದ.ಸಂ.ಸ. ಒಕ್ಕೂಟದಿಂದ ಶ್ರದ್ಧಾಂಜಲಿ ಸಭೆಯನ್ನು ಏರ್ಪಡಿಸಲಾಗಿತ್ತು. ದ.ಸಂ.ಸ. ಒಕ್ಕೂಟದ ಜಿಲ್ಲಾ ಅಧ್ಯಕ್ಷ ಜೆ.ಆರ್. ಪಾಲಾಕ್ಷ ಅವರು ಮಾತನಾಡಿ, ಸಮಾಜಮುಖಿ ಚಿಂತನೆಗಳನ್ನು ಹೆಚ್ಚು ಮೈಗೂಡಿಸಿಕೊಂಡಿದ್ದ ಡಾ. ಸಿದ್ಧಲಿಂಗಯ್ಯ ಅವರ ನಿಧನ ಸಮಾಜಕ್ಕೆ ತೀವ್ರ ಆಘಾತ ಉಂಟುಮಾಡಿದೆ ಎಂದರು. ದ.ಸಂ.ಸ ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ ಎಂ.ಎಸ್. ವಿರೇಂದ್ರ, ತಾಲೂಕು ಕಾರ್ಯದರ್ಶಿ ಸಂದೀಪ್, ಹೋಬಳಿ ಅಧ್ಯಕ್ಷ ಎಸ್.ಎಸ್. ಶಿವಲಿಂಗ, ಕಾರ್ಯಕರ್ತರುಗಳಾದ ಮಂಜಯ್ಯ, ಪಿ. ರಾಹುಲ್, ರಕ್ಷಿತ, ಹಾಸನದ ಚಂದ್ರು ಇತರರು ಡಾ. ಸಿದ್ಧಲಿಂಗಯ್ಯ ಅವರ ಭಾವಚಿತ್ರಕ್ಕೆ ಪುಷ್ಪನಮನ ಮಾಡುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು.