ಕೂಡಿಗೆ, ಜೂ. ೧೭: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಶ್ರೀ ಶಕ್ತಿ ವೃದ್ಧಾಶ್ರಮಕ್ಕೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ.ಬಿ. ಸುರೇಶ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೇಂದ್ರದಲ್ಲಿ ವಯೋವೃದ್ಧರು ಇರುವುದರಿಂದ ಸರಿಯಾಗಿ ಕೊರೊನಾದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾದ ಸೂಚನೆಗಳನ್ನು ಅಧಿಕಾರಿಗಳು ನೀಡಿದರು. ಅಲ್ಲದೆ ಕೊರೊನಾ ಲಸಿಕೆಯ ಮಹತ್ವದ ವಿಷಯಗಳನ್ನು ತಿಳಿಸಿದರು. ಕೇಂದ್ರದಲ್ಲಿ ನೀಡುತ್ತಿರುವ ಆಹಾರ ಶುಚಿತ್ವದ ಬಗ್ಗೆ ಪರಿಶೀಲನೆ ನಡೆಸಿ ನಂತರ ಯೋಗಕ್ಷೇಮವನ್ನು ವಿಚಾರಿಸಿದರು.

ಈ ಸಂದರ್ಭದಲ್ಲಿ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಉಪ ನಿರ್ದೇಶಕಿ ಕೆ.ಜಿ, ವಿಮಲ, ಕೇಂದ್ರ ವ್ಯವಸ್ಥಾಪಕ ಚಂದ್ರು ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.