ಗುಡ್ಡೆಹೊಸೂರು, ಜೂ. ೧೭: ಇಲ್ಲಿನ ಗ್ರಾಮ ಪಂಚಾಯಿತಿ ವತಿಯಿಂದ ಬಸವನಹಳ್ಳಿಯಲ್ಲಿ ಉದ್ದೇಶಿಸಲಾಗಿರುವ ರೂ. ೯.೩೦ ಲಕ್ಷ ವೆಚ್ಚದ ಸ್ವಚ್ಛ ಭಾರತ್ ಮಿಷನ್ ಯೋಜನೆಯ ಅನುದಾನದಲ್ಲಿ ಸ್ವಚ್ಛ ಸಂಕೀರ್ಣ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯಿತಿ ಅಧ್ಯಕ್ಷೆ ನಂದಿನಿ, ಉಪಾಧ್ಯಕ್ಷೆ ಯಶೋಧ ಮತ್ತು ಸರ್ವಸದಸ್ಯರು ಹಾಗೂ ಪಂಚಾಯಿತಿ ಅಧಿಕಾರಿ ಶ್ಯಾಂತಮ್ಮಯ್ಯ ಮತ್ತು ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು.