ಮಡಿಕೇರಿ, ಜೂ. ೧೮ : ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರ ಅಧ್ಯಕ್ಷತೆಯಲ್ಲಿ ತಾ. ೨೨ ರಂದು ಕೈಗಾರಿಕಾ ಸ್ಪಂದನಾ ಸಭೆಯನ್ನು ಏರ್ಪಡಿಸಲಾಗಿದೆ. ಈ ಸಭೆಯಲ್ಲಿ ಉದ್ದಿಮೆದಾರರ ಸಮಸ್ಯೆಗಳನ್ನು ಚರ್ಚಿಸಲಾಗುವುದು. ಕೈಗಾರಿಕೆಗಳಿಗೆ ಸಮಸ್ಯೆಗಳಿದ್ದಲ್ಲಿ, ಈ ಸಮಸ್ಯೆಗಳನ್ನು ಲಿಖಿತ ರೂಪದಲ್ಲಿ ಈ ಕಾರ್ಯಾಲಯಕ್ಕೆ ತಾ. ೨೧ ರೊಳಗೆ ಇ-ಮೇಲ್: ರಿಜ-ಞoಜಚಿgu @ಞಚಿಡಿಟಿಚಿಣಚಿಞಚಿiಟಿಜusಣಡಿಥಿ.gov.iಟಿ ಮುಖಾಂತರ ಅಥವಾ ಖುದ್ದಾಗಿ ಲಿಖಿತವಾಗಿ ಸಲ್ಲಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.