*ಗೋಣಿಕೊಪ್ಪ, ಜೂ. ೧೭: ಪೊನ್ನಂಪೇಟೆ ತಾಲೂಕು ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿಯಾಗಿ ಕೆ.ಆರ್. ರಾಜೇಶ್ ಅವರನ್ನು ಜಿಲ್ಲಾಡಳಿತ ನೇಮಕ ಮಾಡಿದ್ದು, ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರ ಆಡಳಿತ ಮಂಡಳಿ ಪದಾಧಿಕಾರಿಗಳು ಅಧಿಕಾರಿಗೆ ಹೂಗುಚ್ಚ ನೀಡಿ ಸ್ವಾಗತಿಸಿದರು.

ತಾಲೂಕಿನ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಶ್ ಅವರನ್ನು ಖಾಲಿ ಇದ್ದ ಪೊನ್ನಂಪೇಟೆ ಶಿಶು ಅಭಿವೃದ್ಧಿ ಪ್ರಭಾರ ಯೋಜನಾಧಿಕಾರಿಯಾಗಿ ಹುದ್ದೆ ನಿಭಾಯಿಸುವಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಹಿಂದೆ ಹುದ್ದೆಯನ್ನು ಸೀತಾಲಕ್ಷಿ÷್ಮ ಅವರು ನಿರ್ವಹಿಸುತ್ತಿದ್ದರು. ಸೀತಾಲಕ್ಷಿ÷್ಮ ಅವರ ನಿರ್ವಹಣೆಯಲ್ಲಿ ಪಾರದರ್ಶಕತೆ ಇಲ್ಲ ಎಂದು ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಿರತರಾಗಿ ಅಧಿಕಾರಿಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೇ ಅಧಿಕಾರಿಯನ್ನು ಬದಲಾಯಿಸುವಂತೆ ಶಾಸಕರು ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿ ಹೋರಾಟ ನಡೆಸಿದ್ದರು. ಕಾರ್ಯಕರ್ತೆಯರ ಹೋರಾಟದ ಫಲವಾಗಿ ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿಯನ್ನು ವರ್ಗಾವಣೆಗೊಳಿಸಿ ನೂತನ ಪ್ರಭಾರ ಅಧಿಕಾರಿಯಾಗಿ ರಾಜೇಶ್ ಅವರನ್ನು ನೇಮಕ ಮಾಡಲಾಯಿತು. ಇದು ಹೋರಾಟಕ್ಕೆ ಸಂದ ಜಯವಾಗಿದೆ ಎಂದು ತಾಲೂಕು ಅಧ್ಯಕ್ಷೆ ಸುಮಿತ್ರಾ ತಿಳಿಸಿದ್ದಾರೆ. ಈ ಸಂದರ್ಭ ತಾಲೂಕು ಕಾರ್ಯದರ್ಶಿ ನಳಿನಾಕ್ಷಿ, ಜಿಲ್ಲಾಧ್ಯಕ್ಷೆ ಚೇಂದಿರ ಕಾವೇರಮ್ಮ ಮತ್ತು ಪದಾಧಿಕಾರಿಗಳು ಹಾಜರಿದ್ದರು.