ಸಿದ್ದಾಪುರ, ಜೂ. ೧೭: ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹಾಡಿಯ ನಿವಾಸಿಗಳಿಗೆ ಪೌಷ್ಟಿಕ ಆಹಾರಗಳನ್ನು ನೀಡಬೇಕೆಂದು ಮಾಲ್ದಾರೆ ಗ್ರಾಮ ಪಂಚಾಯಿತಿ ಸದಸ್ಯೆ ಸರಸ್ವತಿ ಶಾಸಕ ಕೆ.ಜಿ. ಬೋಪಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಕೊರೊನಾ ಸೋಂಕು ಹರಡದಂತೆ ಸರಕಾರವು ಲಾಕ್‌ಡೌನ್ ಘೋಷಣೆಯಾದ ಬಳಿಕ ಮಾಲ್ದಾರೆ ಗ್ರಾಮ ಪಂಚಾಯಿತಿಯ ಹಾಡಿಗಳಲ್ಲಿ ವಾಸಮಾಡಿಕೊಂಡಿರುವ ನಿವಾಸಿಗಳಿಗೆ ಸಮರ್ಪಕವಾಗಿ ಕೂಲಿ ಕೆಲಸಗಳು ಇಲ್ಲದೇ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಜೀವನ ನಿರ್ವಹಣೆ ಮಾಡಲು ಸಾಧÀ್ಯವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಹಾಡಿಗಳ ನಿವಾಸಿಗಳಿಗೆ ಸಂಬAಧಪಟ್ಟ ಇಲಾಖೆಯ ವತಿಯಿಂದ ಪೌಷ್ಟಿಕ ಆಹಾರಗಳನ್ನು ಒದಗಿಸಿಕೊಡಬೇಕೆಂದು ಶಾಸಕರ ಬಳಿ ಮನವಿ ಮಾಡಿಕೊಂಡಿದ್ದಾರೆ.