ಕುಶಾಲನಗರ, ಜೂ.೧೯: ಕರ್ನಾಟಕ ಜಾನಪದ ಪರಿಷತ್ ಆಶ್ರಯದಲ್ಲಿ ಅರಣ್ಯ ಇಲಾಖೆ ಹಾಗೂ ಬಸವನಹಳ್ಳಿ ಲ್ಯಾಂಪ್ಸ್ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ‘ಜಾನಪದ ಮೈತ್ರಿ’ ಕಾರ್ಯಕ್ರಮ ತಾ. ೨೦ರಂದು (ಇಂದು) ನಡೆಯಲಿದೆ.

ಆನೆಕಾಡು ಅರಣ್ಯ ವ್ಯಾಪ್ತಿಯ ಅರಣ್ಯ ನಾಶವಾಗಿರುವ ಪ್ರದೇಶದಲ್ಲಿ ಕಾಡು ಮರಗಳ ಬೀಜ ಬಿತ್ತನೆ ಕಾರ್ಯ ಹಮ್ಮಿಕೊಳ್ಳಲಾಗಿದೆ. ಅರಣ್ಯ ವಲಯಾಧಿಕಾರಿ ಅನನ್ಯಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.